(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 21. ಬೈಕ್ ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್, ಆರ್ ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಎಂದು ಗುರುತಿಸಲಾಗಿದೆ.
ಪಂಕಜ್ ರೈ ಅವರು ಸಂಜೆ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಮೂವರು, ಪಂಕಜ್ ರೈ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.














