ಹಿಂದಿನ ನಿಯಮಗಳನ್ನು ಅನುಸರಿಸುವಂತೆ ಆಗ್ರಹ   ಎನ್ ಎಸ್ ಯುಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಈ ಹಿಂದೆ ಅನುಸರಿದ ನಿಯಮಗಳನ್ನೇ ಕಾಲೇಜಿನಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ (ಎನ್‌ ಎಸ್‌ ಯುಐ) ನೇತೃತ್ವದಲ್ಲಿ ಕಾಲೇಜಿನ ಮುಂಭಾಗದ ಗೇಟ್ ಎದುರಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಸ್ವಾತಿ ಪೂಜಾರಿ, ಕಾಲೇಜಿನಲ್ಲಿ ಯಾವುದೇ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಬೆಂಬಲ ಸಿಗುತ್ತಿಲ್ಲ. ಅಲ್ಲದೇ ಏನೇ ಮಾಡುವುದಿದ್ದರೂ ವಿದ್ಯಾರ್ಥಿಗಳೇ ಕೈಯಿಂದ ಹಣ ಹಾಕಿ ಮಾಡಬೇಕಾಗಿದೆ. ಕಾಲೇಜಿನಿಂದಲೇ ಹಿಂದಿನಂತೆ ಬೆಂಬಲ ಸಿಕ್ಕರೆ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದರು.

                                                                                                                                                                           

 

error: Content is protected !!

Join the Group

Join WhatsApp Group