ರಾಜತಾಂತ್ರಿಕತೆ ಮತ್ತು ಮಾತುಕತೆ ಸಂಘರ್ಷದ ಶಾಂತಿಯುತ ಪರಿಹಾರ        ‘ಇದು ಯುದ್ಧದ ಯುಗವಲ್ಲ’- ಪ್ರಧಾನಿ ನರೇಂದ್ರ ಮೋದಿ 



(ನ್ಯೂಸ್ ಕಡಬ) newskadaba.c0m ವಾಸಾ, ಆ. 22.  ಉಕ್ರೇನ್ ಭೇಟಿಗೂ ಒಂದು ದಿನ ಮುನ್ನ ಪೋಲೆಂಡ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಯಾವುದೇ ಸಂಘರ್ಷವನ್ನು ಪರಿಹರಿಸಬಹುದು. ಇದು ಯುದ್ಧದಯುಗವಲ್ಲ ಎಂದು ಹೇಳಿದರು.







ವಾಸಾದಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ದೇಶಗಳಿಂದ ಅಂತರಕಾಯ್ದುಕೊಳ್ಳಬೇಕು ಎನ್ನುವುದು ಭಾರತ ದಶಕಗಳಿಂದ ಪಾಲಿಸಿಕೊಂಡು ಬಂದ ನೀತಿ. ಆದರೆ ಎಲ್ಲಾ ದೇಶಗಳಿಗೆ ಹತ್ತಿರವಾಗುವುದು ಇಂದಿನ ಭಾರತದ ನೀತಿ ಎಂದು ಹೇಳಿದರು.






 

error: Content is protected !!
Scroll to Top