’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ನಮ್ಮಿಂದ ಸರ್ಕಾರ ಅಸ್ಥಿರವಾಗುವುದಿಲ್ಲ. ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾವ ಕಾರಣಕ್ಕೂ ನಿಮ್ಮ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಿಮ್ಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಸಿಎಂ ಮೇಲೆ ಆರೋಪ ಬಂದಿದೆ. ಅವರು ಶುದ್ಧರಾಗಿ ಹೊರಗೆ ಬರಲಿ. ಪಾರದರ್ಶಕ ತನಿಖೆ ನಡೆಯಲಿ ಎಂದು ಹೇಳಿದರು.

Also Read  ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್

 

 

 

error: Content is protected !!
Scroll to Top