ಶಿರೂರು ಭೂಕುಸಿತ ಪ್ರಕರಣ     ವಿಶೇಷ ಅನುದಾನಕ್ಕೆ ಮೋದಿ ಅನುಮೋದನೆ  

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 23.  ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.

ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್​​ನಿಂದ 5 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

 

 

 

error: Content is protected !!

Join the Group

Join WhatsApp Group