(ನ್ಯೂಸ್ ಕಡಬ) newskadaba.c0m ಕಠ್ಮಂಡು, ಆ. 23. ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಭಾರತೀಯ-ನೋಂದಾಯಿತ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದು ಬಂದಿದೆ.

ತನಾಹುನ್ ಜಿಲ್ಲೆಯ ಐನಾ ಪಹಾರಾದಲ್ಲಿ ಹೆದ್ದಾರಿ ಮೂಲಕ ರೆಸಾರ್ಟ್ ಪಟ್ಟಣವಾದ ಪೊಖರಾದಿಂದ ರಾಜಧಾನಿ ಕಠ್ಮಂಡು ಕಡೆಗೆ ಹೋಗುತ್ತಿತ್ತು. UP 53 FT 7623 ನಂಬರ್ ಪ್ಲೇಟ್ ಹೊಂದಿರುವ ಬಸ್ನಿಂದ ಕನಿಷ್ಠ 29 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.















