ಶಿವಮೊಗ್ಗದಲ್ಲಿ ಸೇನಾ ನೇಮಕಾತಿ ರ್ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಶಾರ್ಟ್‍ಲಿಸ್ಟ್ ಮಾಡಿದ ಪುರುಷ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ಹೆಚ್‍ಕ್ಯು ನೇಮಕಾತಿ ವಲಯದ ಆಶ್ರಯದಲ್ಲಿ ಸೇನಾ ನೇಮಕಾತಿ ಕಚೇರಿ, ಮಂಗಳೂರಿನಿಂದ ಆಗಸ್ಟ್ 22ರಿಂದ 31 ಆಗಸ್ಟ್ 2024ರ ವರೆಗೆ ಶಿವಮೊಗ್ಗದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ

ಜಿಲ್ಲೆಗಳು:- ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ್, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ.

ಏಪ್ರಿಲ್ 22 ರಿಂದ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ನಂತರ ಶಾರ್ಟ್‍ಲಿಸ್ಟ್ ಆಗಿರುವ ಅಭ್ಯರ್ಥಿಗಳಿಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ ಮೆನ್ (10 ನೇ ತೇರ್ಗಡೆ), ಅಗ್ನಿವೀರ್ ಟ್ರೇಡ್ಸ್‍ಮೆನ್ (8ನೇ ತೇರ್ಗಡೆ) ಮತ್ತು ಅಗ್ನಿವೀರ್ ಆಫೀಸ್ ಸಹಾಯಕ್ಕಾಗಿ ದಾಖಲಾತಿಗಾಗಿ ನಡೆಸಲಾಗುತ್ತಿದೆ. ರ್ಯಾಲಿಯನ್ನು ಸುಗಮವಾಗಿ ನಡೆಸಲು ಎಲ್ಲಾ ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತ ವತಿಯಿಂದ ಮಾಡಲಾಗುತ್ತದೆ. ಶಾರ್ಟ್‍ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪ್ರವೇಶ ಕಾರ್ಡ್‍ಗಳನ್ನು ಈಗಾಗಲೇ ಅವರ ನೋಂದಾಯಿತ ಇಮೇಲ್ ಐಡಿಗೆ ಕಳುಹಿಸಲಾಗಿದೆ ಮತ್ತು ಅವರ ಯೂಸರ್‍ ನೇಮ್ ಹೆಸರು ಮತ್ತು ಪಾಸ್‍ವರ್ಡ್ ಮೂಲಕ Join Indian Army ವೆಬ್‍ಸೈಟ್‍ನಲ್ಲಿ ಲಾಗಿನ್ ಆಗಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group