ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಿರುತ್ತದೆ.

ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು. ಸರಕಾರವು ಕೊನೆಯ ಅವಕಾಶವಾಗಿ ಈ ತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ತಿಳಿಸಿದೆ. ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಅಲ್ಲಿನ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್  ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯ ಸೂಚನೆಯಾಗಿದೆ. ಆಗಸ್ಟ್ 31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶವಿದೆ. ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಬಯೋದೃಢೀಕರಣ ಮಾಡಿಸಬೇಕು, ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ಧೃಢಪತ್ರ, ಆಧಾರ್ ಸಂಖ್ಯೆ, ಫೋನ್ ನಂಬರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಬಾಕಿ ಉಳಿದಿರುವ ಸದಸ್ಯರು ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿ ಕೊಂಡು ಪಡಿತರ ಚೀಟಿಯನ್ನು ಮುಂದುವರಿಸಬಹುದಾಗಿದೆ ಎಂದು  ಜಿಲ್ಲಾಧಿಕಾರಿ  ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group