ದಕ್ಷಿಣ ಭಾರತದ ಮೊದಲ ಆದಿವಾಸಿ ಜ್ಞಾನ ಕೇಂದ್ರ ‘ಕಾನು’ ಆ.25 ರಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 24.  ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’ ಆಗಸ್ಟ್ 25 ರಂದು ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ. ‘ಕಾನು’ ಎಂದರೆ ಸೋಲಿಗ ಭಾಷೆಯಲ್ಲಿ ನಿತ್ಯಹರಿದ್ವರ್ಣ ಕಾಡು ಎಂದರ್ಥ. ಇದು ದಕ್ಷಿಣ ಭಾರತದ ಮೊದಲ ಆದಿವಾಸಿ ಜ್ಞಾನ ಕೇಂದ್ರವಾಗಲಿದೆ ಎನ್ನಲಾಗಿದೆ.

ದಕ್ಷಿಣ ಭಾರತದಲ್ಲಿ ಆದಿವಾಸಿಗಳಿಗೆ ಸಂಬಂಧಿಸಿದ ವಿವಿಧ ಅಂಶಗಳ ಸಂಶೋಧನೆಗೆ ಮೀಸಲಾದ ಯಾವುದೇ ಸಂಸ್ಥೆ ಇಲ್ಲ. ಬುಡಕಟ್ಟು ಸಮುದಾಯಗಳ ವಿದ್ವಾಂಸರು ಕಳೆದ ವರ್ಷ ಬಿಆರ್ ಹಿಲ್ಸ್ ನ ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ ಸಂಶೋಧಕರಾದ ಪ್ರಶಾಂತ್ ಎನ್ ಶ್ರೀನಿವಾಸ್ ಮತ್ತು ಜರ್ಮನಿಯ ವ್ರೇನರ್ ಅವರೊಂದಿಗೆ ಮಾತುಕತೆ ನಡೆಸಿದರು. ಜೇನು ಕುರುಬ, ಕಾಡು ಕುರುಬರಿಗೆ ಸಂಬಂಧಿಸಿದ ಕೃತಿಗಳನ್ನು ಪ್ರದರ್ಶಿಸಲು ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಈ ವಿಶೇಷ ಗ್ರಂಥಾಲಯವನ್ನು ಸ್ಥಾಪಿಸಲು ನಿರ್ಧರಿಸಿದರು ಎಂದು ವರದಿಯಾಗಿದೆ.

Also Read  WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ "ಅಂಡರ್ ಟೇಕರ್"

 

 

error: Content is protected !!
Scroll to Top