ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 24. ಪತಿ- ಪತ್ನಿ ಸಾವಿನಲ್ಲಿ ಒಂದಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶೇಖರ್​ (70) ಹಾಗೂ ಸುಮಿತ್ರಮ್ಮ (65) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಕೃಷಿಕರಾಗಿದ್ದು, ಗ್ರಾಮ ಸಮೀಪದ ರಾಮನಗುಡ್ಡ ಬಳಿಯ ಜಮೀನಿನಲ್ಲಿ ವಾಸವಿದ್ದರು. ಮೊದಲಿಗೆ ಪತ್ನಿ ಸುಮಿತ್ರಮ್ಮರವರಿಗೆ ಹೃದಯಘಾತವಾಗಿ ಮೃತಪಟ್ಟರೆ, ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶೇಖರ್ ರವರು ಸಹ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group