ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

 

 

Scroll to Top