10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ.

ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.

ಆರೋಪಿಯು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪರಿಯಶಾಂತಿ, ಬೆದ್ರೋಡಿ ನೀರಕಟ್ಟೆ ಎಂಬಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿ ಗೊಂಡಿರುತ್ತಾನೆ. ಅಲ್ಲದೇ 10-10-2023 ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಹೆದ್ದಾರಿ 75ರ ಅಗಲೀಕರಣ ಕಾಮಗಾರಿಗೆ ಉಪಯೋಗಿಸುವ ಕೆ.ಎನ್. ಆರ್ ಸಂಸ್ಥೆಯ ಕಬ್ಬಿಣದ ಸೀಟ್ ಗಳನ್ನು ಕಳ್ಳತನ ಮಾಡಿರುತ್ತಾನೆ.

1) ಮಂಗಳೂರು ಕಂಕನಾಡಿ ಪೊಲೀಸ್ ಠಾಣಾ ಎನ್.ಡಿ.ಪಿ.ಎಸ್ ಕಾಯ್ದೆ.2) ಮಂಗಳೂರು ಉತ್ತರ ಪೊಲೀಸ್ ಠಾಣೆ ಕನ್ನ ಕಳವು, 3) ಉಡುಪಿ ಜಿಲ್ಲೆಯ ಗಂಗೋಳ್ಳಿ ಪೊಲೀಸ್ ಠಾಣಾ ಆತ್ಮಹತ್ಯೆ ಪ್ರಚೋದನೆ, 4) ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯ ಸುಲಿಗೆ, 5) ಸಕಲೇಶಪುರ ನಗರ ಪೊಲೀಸ್ ಠಾಣಾ ಸಂಶಯಾಸ್ಪದ ವಶಕ್ಕೆ 6) ಸಕಲೇಶಪುರ ನಗರ ಪೊಲೀಸ್ ಠಾಣಾ ಸಾಮಾನ್ಯ, ಕಳವು 7) ಕಡಬ ಪೊಲೀಸ್ ಠಾಣಾ ಸಾಮಾನ್ಯ ಕಳವು. ಕನ್ನಕಳವು 8) ಬೆಂಗಳೂರು ಕೊತ್ತುಲೂರು ಪೊಲೀಸ್ ಠಾಣಾ ದರೊಡೆ ಪ್ರಕರಣ 9) ಗೋಣಿಬೀಡು ಪೊಲೀಸ್ ಠಾಣೆ ದರೊಡೆ ಪ್ರಕರಣ 11) ಬೆಳ್ತಂಗಡಿ ಪೊಲೀಸ್‌ ಠಾಣಾ ಪ್ರಕರಣಕ್ಕೆ ಸಂಬಂಧಿಸಿ ಈತನ ವಿರುದ್ದ ವಿವಿಧ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

error: Content is protected !!

Join the Group

Join WhatsApp Group