ಸಾಲ ಮನ್ನಾ ಮಾಡಿರುವ ಸಿಎಂ ಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.29. ರೈತರ ಸಾಲ ಮನ್ನಾ ಖುಷಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ.

ರೈತರ ಉದ್ದಾರಕ್ಕಾಗಿ, ಉತ್ತಮ ರಸ್ತೆಗಳ ನಿರ್ಮಾಣದ ಹೆಸರಿನಲ್ಲಿ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ತೆಗೆದುಕೊಂಡಿರುವ ಸಾಲವನ್ನೇ ಸರಿಯಾಗಿಯೇ ಬಳಸಿಕೊಂಡಿಲ್ಲ ಅಂತ ಗರಂ ಆಗಿ ಪತ್ರ ಬರೆದಿದೆ.

ಮಿಲಿಯನ್ ಗಟ್ಟಲೆ ಸಾಲವಿದೆ.  ಆದರೆ ಆ ಯೋಜನೆಗಳು ಮಾತ್ರ ಶೇ.20ರಷ್ಟು ಮುಗಿದಿಲ್ಲ. ಇನ್ನು ಆ ಯೋಜನೆಗೆ ನಿಗದಿಪಡಿಸಿರುವ ಸಮಯ ಶೇ. 60ರಷ್ಟು ಮುಗಿದಿದೆ ಅಂತಾ ಖಾರವಾಗಿ ಪತ್ರ ಬರೆಯಲಾಗಿದೆ.

ಕೃಪೆ: ಪಬ್ಲಿಕ್ ಟಿವಿ

Scroll to Top