ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ ಮುಳುಗಡೆಯಾಗಿದ್ದರು. ಇದೀಗ ಆರೊನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮಾಧವ್ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಇನ್ನು ಮೃತ ವಿದ್ಯಾರ್ಥಿ ಆರೊನ್ ಪೋಷಕರು ವಿದೇಶದಿಂದ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ರಷ್ಯಾ ರಾಜಧಾನಿ ಮಾಸ್ಕೋ ನಗರದ ಮೇಲೆ ಡ್ರೋನ್ ದಾಳಿ.!

 

 

error: Content is protected !!
Scroll to Top