ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ.

ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು ಎಂದು ಬೆಂಗಳೂರಿನ ಸಿಟಿ ಮತ್ತು ಸಿವಿಲ್ ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಆದೇಶ ಹೊರಡಿಸಿದೆ ಎನ್ನಲಾಗಿದೆ.

Also Read  ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್

 

 

error: Content is protected !!
Scroll to Top