ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚನ್ನಪಟ್ಟಣ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಭೇಟಿ ನಂತರ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಚನ್ನಪಟ್ಟಣದ ಬಗ್ಗೆ ಹೆಚ್ಚು ಚರ್ಚೆಯಾಗಿದೆ ಎಂದು ಹೇಳಿಕೆ ನೀಡಿದರು ಎಂದು ವರದಿಯಾಗಿದೆ.

 

Scroll to Top