ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್



(ನ್ಯೂಸ್ ಕಡಬ) newskadaba.com ವಿಜಯಪುರ, ಸೆ. 02.  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್ ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.







ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಜೈಲು ಅಧೀಕ್ಷಕ ಡಾ.ಐ.ಜೆ.ಮ್ಯಾಗೇರಿ ಹೇಳಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.






  

 

error: Content is protected !!
Scroll to Top