ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಲೈಂಗಿಕ ದೌರ್ಜನ್ಯ ಆರೋಪದಡಿ ಮಹಿಳೆಯೋರ್ವರು ನೀಡಿದ ದೂರಿನ ಹಿನ್ನೆಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯವು ಸೋಮವಾರದಂದು ಜಾಮೀನು ಮಂಜೂರು ಮಾಡಿದೆ.

ಪುತ್ತೂರು ಮಹಿಳಾ ಠಾಣೆಯಲ್ಲಿ ಭಾನುವಾರದಂದು ಮಹಿಳೆಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ. ಬಳಿಕ ಮಾದ್ಯಮ ಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group