ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 03. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ.


ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ ಖಾನ್ ಅವರನ್ನು ಈಡಿ ಕಸ್ಟಡಿಗೆ ಒಪ್ಪಿಸಿದ್ದು, ಸೆ.6ರಂದು ನ್ಯಾಯಾಲಯದ ಮುಂದೆ ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

Also Read  ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ 'ಸಿಎಂ ಬೊಮ್ಮಾಯಿ' ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

 

error: Content is protected !!
Scroll to Top