ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ.

ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ ಮಧ್ಯಾವಧಿಯಲ್ಲಿ ಪ್ರಶಾಂತ್ ಶೆಟ್ಟಿಯ ಗಮನಕ್ಕೆ ಬಾರದೇ ಅಪರಿಚಿತರು ಆನ್‌ಲೈನ್ ಮೂಲಕ ಎರಡು ಖಾತೆಗಳಿಂದ ಹಂತ ಹಂತವಾಗಿ ಒಟ್ಟು 1,56,100ರೂ. ನಗದನ್ನು ವರ್ಗಾಯಿಸಿಕೊಂಡುಕೊಂಡು ವಂಚಿಸಿರುವುದಾಗಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ಎಎಸ್‌ಐ ಉಮೇಶ್ ಜೋಗಿ ಮತ್ತು ಸಿಬ್ಬಂದಿ ನಿಲೇಶ್ ತಂಡ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಒರಿಸ್ಸಾ ರಾಜ್ದ ಬೈರಂಪುರಕ್ಕೆ ತೆರಳಿ ಬಂಧಿಸಿದೆ ಎಂದು ವರದಿ ತಿಳಿದುಬಂದಿದೆ.

Also Read  ಉಳ್ಳಾಲ: 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ನರ್ಸಿಂಗ್ ಕಾಲೇಜು ಸೀಲ್ ಡೌನ್..!

 

error: Content is protected !!
Scroll to Top