ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು

(ನ್ಯೂಸ್ ಕಡಬ) newskadaba.com  ಸುರತ್ಕಲ್, ಸೆ. 5. ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.


ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ

 

error: Content is protected !!
Scroll to Top