ಸ್ಯಾಂಡಲ್ ವುಡ್- ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಆಗ್ರಹ- ಸಮಿತಿ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ ‘FIRE’

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಮಲಯಾಳಂ ಚಿತ್ರರಂಗದ ಸ್ಫೋಟಕ ಮಾಹಿತಿ ಹೊರಬರುತ್ತಿದ್ದಂತೆಯೇ ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ಸಮಿತಿಯೊಂದನ್ನು ರಚಿಸುವಂತೆ ಆಗ್ರಹಿಸಿ ಫಿಲ್ಮ್‌ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ ಸಂಸ್ಥೆ (ಫೈರ್)ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್, ನಟಿ ಶೃತಿ ಹರಿಹರನ್‌ ಮೊದಲಾದವರು ಜೊತೆಗಿದ್ದರು. ಮಲಯಾಳಂ ಚಿತ್ರರಂಗದಲ್ಲಿನ ಲೈಂಗಿಕ ಕಿರುಕುಳದ ಕುರಿತು ನ್ಯಾಯಾಮೂರ್ತಿ ಹೇಮಾ ಸಮಿತಿಯು ಇತ್ತೀಚೆಗಷ್ಟೇ ಸ್ಪೋಟಕ ಮಾಹಿತಿಯನ್ನು ಬಹಿರಂಗಗೊಳಿಸಿತ್ತು.

error: Content is protected !!

Join the Group

Join WhatsApp Group