ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 05. ಮನೆಯಲ್ಲಿ ಆಟವಾಡುತ್ತಾ ಜ್ಯೂಸ್ ಬಾಟಲ್ನ ಮುಚ್ಚಲು ನುಂಗಿದ್ದ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ಜ್ಯೂಸ್ ಬಾಟಲಿ ಹಿಡಿದುಕೊಂಡು ಆಟವಾಡುತ್ತಿದ್ದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬವರ ಮಗು ಬಾಟಲಿಯ ಮುಚ್ಚಳವನ್ನು ನುಂಗಿದ್ದು, ಮನೆಯವರ ಗಮನಕ್ಕೆ ಬಂದಿರಲಿಲ್ಲ. ಬಳಿಕ ಮಗುವಿಗೆ ಉಸಿರುಗಟ್ಟಿದ ಅನುಭವವಾಗುತ್ತಿದ್ದಂತೆ ಇದು ಅರಿವಿಗೆ ಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದಾಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group