ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.


ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ ದಾಟುತ್ತಿದ್ದ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ನಿವಾಸಿ ಕುಮಾರ ಪ್ಯಾಟಿ(18) ಹಾಗೂ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24) ಎಂದು ಗುರುತಿಸಲಾಗಿದೆ. ಕುಂಟೋಜಿ ಜಾತ್ರೆ ನಡೆಯುತ್ತಿದ್ದು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಏಳು ಮಂದಿ ರಸ್ತೆ ಬದಿ ವಾಹನ ನಿಲ್ಲಿಸಿ, ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಅತಿ ವೇಗದಿಂದ ಬಂದ ಬೈಕ್ ರಸ್ತೆ ದಾಟುತ್ತಿದ್ದವರಿಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

 

 

error: Content is protected !!
Scroll to Top