ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು ಎಂದು ವರದಿ ತಿಳಿಸಿದೆ.

Also Read  ದೀಪದ ಹತ್ತಿರ ಬರುವ ಕೊರೋನ ವೈರಸ್​ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್

 

error: Content is protected !!
Scroll to Top