ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 10. ನಾಗಾರಾಧನೆಯ ಪುಣ್ಯ ತಾಣವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 12ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5:15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7:30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.

ದರುಶನದಲ್ಲಿ ವ್ಯತ್ಯಯ: ಈ ದಿನ ಬೆಳಗ್ಗೆ 10 ಗಂಟೆಯ ನಂತರ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಅಲ್ಲದೇ ಆಶ್ಲೇಷ ಬಲಿ ಸೇವೆಯು ಬೆಳಗ್ಗೆ 9 ಗಂಟೆಯ ನಂತರ 2 ಪಾಳಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group