ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರದಂದು ನಡೆಯಿತು.

ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸೋಮವಾರ ಶುದ್ದಿ ಷಷ್ಠಿ ಅಚರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಮೊದಲಾದವರು ಉಪಸ್ಥಿತರಿದ್ದರು. ಗಣೇಶ ಚತುರ್ಥಿಯ ಅಂಗವಾಗಿ ಶ್ರೀ ಗಣಪತಿ ದೇವರನ್ನು ವಿಶೇಷವಾಗಿ ಅಲಂಕರಿಸಿ ಗಣಪತಿ ಹವನ ನಡೆಸಲಾಯಿತು.

error: Content is protected !!

Join the Group

Join WhatsApp Group