ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group