ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11. ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರದಂದು ಮಧ್ಯರಾತ್ರಿ ತ್ಯಾಗರಾಜನಗರದಲ್ಲಿ ನಡೆದಿದೆ.


ಗಂಭೀರ ಗಾಯಗೊಂಡವರನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡ ಎಂಬವರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಶ್ರೀ ಗಣೇಶನ ಶೋಭಾಯಾತ್ರೆ ನೋಡಿಕೊಂಡು ಮನೆಗೆ ತನ್ನ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಂಭೀರ ಗಾಯಗೊಂಡ ಕೀರ್ತನ್ ಗೌಡರವರನ್ನು ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್‌ಗೆ ಯಾವುದೇ ವಾಹನ ಡಿಕ್ಕಿ ಹೊಡೆದು ಹೋಗಿರಬಹುದು ಎಂದು ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

Scroll to Top