ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ ತೆರಳಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹೊಟೇಲ್‌ ಸಂಬಳದಿಂದ ಕುಟುಂಬ ನಿರ್ವಹಣೆ ಕಷ್ಟವಾಗಿತ್ತಲ್ಲದೇ ಜತೆಗೆ ಸಹೋದರಿ ಮದುವೆಯ ಹೊಣೆಗಾರಿಕೆ ಇದ್ದ ಕಾರಣ ಗಾಂಜಾ ಮಾರಾಟ ದಂಧೆಗೆ ಇಳಿದಿರುವುದಾಗಿ ಆರೋಪಿ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

Scroll to Top