ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ.

ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ  ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು, ಪ್ರಾಣಿ ಪ್ರಿಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪ್ರಕರಣದ ಕುರಿತು ಪಾಲಿಕೆಯ ಗಮನಕ್ಕೆ ಬಂದಿದ್ದು, ಅದರಂತೆ ವಾಹನದ ಚಾಲಕರನ್ನು ಕರೆದು ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ.

error: Content is protected !!

Join the Group

Join WhatsApp Group