(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ.
