ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ. ಪಡಿತರ ಅಕ್ಕಿ ಸಹಿತ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.


ಬಂಧಿತರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳಿಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು 900 ಕೆ. ಜಿ.ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿ ಆಧರಿಸಿ ಪಟ್ಟಣ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group