ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ.

ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಕುರಿತಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

error: Content is protected !!

Join the Group

Join WhatsApp Group