ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 14. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭವು ಶನಿವಾರ ನಡೆಯಿತು.

ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅಭಿನಂದಿಸಿದರು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್, ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಕಾಲೇಜಿನ ವತಿಯಿಂದ ಪ್ರಾಚಾರ್ಯ ಸೋಮಶೇಖರ್ ನಾಯಕ್ ಗೌರವಿಸಿದರು‌. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ಪ್ರೌಢಶಾಲಾ ಮುಖ್ಯ ಗುರು ಕೆ.ಯಶವಂತ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಕಾಲೇಜಿನ ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್. ಆರ್, ಪ್ರೌಢಶಾಲಾ ಹಿರಿಯ ಶಿಕ್ಷಕ ಎಂ. ಕೃಷ್ಣ ಭಟ್, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗಣೇಶ್ ಪರ್ವತಮುಖಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!

Join WhatsApp Group

WhatsApp Share