ಮಂಗಳೂರು: ಸ್ಕ್ರೂ ಡ್ರೈವರ್ ನಿಂದ ಇರಿದು ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.03. ಕ್ಷುಲ್ಲಕ ಕಾರಣಕ್ಕಾಗಿ ಸ್ಕ್ರೂಡ್ರೈವರ್ ನಿಂದ ಇರಿದು ಲಾರಿ ಚಾಲಕನೋರ್ವನನ್ನು ಕೊಲೆಗೈದ ಘಟನೆ ನಗರದ ಹೊರವಲಯದ ಪಡೀಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವಮಣಿ(38) ಎಂದು ಗುರುತಿಸಲಾಗಿದೆ. ಸೆಲ್ವಮಣಿ ಹಾಗೂ ಇನ್ನೊಂದು ಲಾರಿಯ ಚಾಲಕ ತಮಿಳುನಾಡು ಮೂಲದ ಸುರೇಶ್ ಕುಮಾರ್ ನಡುವೆ ಶುಕ್ರವಾರ ತಡರಾತ್ರಿ ಪಡೀಲ್‌ನ ನೂತನ ರೈಲ್ವೆ ಸೇತುವೆ ಸಮೀಪ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಯು ಸ್ಕ್ರೂ ಡ್ರೈವರ್ ನಿಂದ ಸೆಲ್ವಮಣಿಗೆ ತಿವಿದು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

error: Content is protected !!

Join the Group

Join WhatsApp Group