ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17.  ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು ಎನ್ನಲಾಗಿದೆ.

 

Scroll to Top