ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಉಡುಪಿ ಪೊಲೀಸ್‌ ವೈರ್‌ ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ(52) ಎಂಬವರು ಮಂಗಳವಾರದಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

 

error: Content is protected !!
Scroll to Top