ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರದಂದು ವರ್ಗಾಯಿಸಿದ್ದಾರೆ. ಹಾಗೂ ಸಚಿವೆ ಆತಿಶಿ ಅವರು ಸೆಪ್ಟೆಂಬರ್‌ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಕಳೆದ ವಾರ ಜಾಮೀನು ಪಡೆದಿರುವ ಅವರು, ಜನರು ಮತ್ತೊಮ್ಮೆ ಅಧಿಕಾರ ನೀಡುವವರೆಗೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದ ಕೇಜ್ರಿವಾಲ್‌, ತಮ್ಮ ಉತ್ತರಾಧಿಕಾರಿಯಾಗಿ ಸಚಿವೆ ಆತಿಶಿ ಅವರ ಹೆಸರನ್ನು ಘೋಷಿಸಿದ್ದರು.

error: Content is protected !!

Join the Group

Join WhatsApp Group