ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19.  ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಟೆಂಪೋ ಚಾಲಕ ದುರ್ಗೇಶ್ (21), ಕಾರು ಚಾಲಕ ರಾಜೇಶ್ (28), ಕಾರಿನಲ್ಲಿದ್ದ,ಅಭಿ, ಚಂದನ್, ಮೋಹನ, ಬಾಲ, ಟೆಂಪೋದಲ್ಲಿದ್ದ ಕಾಂತರಾಜೇ ಅರಸ್, ವರಲಕ್ಷ್ಮೀ, ಶೆಟ್ಟಮ್ಮಣ್ಣಿ, ನಾಗರಾಜೇ ಅರಸ್, ಕಾಂಚನ ಅವರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಅಪಘಾತ ನಡೆದ ಸ್ಥಳ ಮತ್ತು ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತಹಸೀಲ್ದಾ‌ರ್ ಡಾ.ಸ್ಮಿತಾರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎನ್ನಲಾಗಿದೆ.

Accident
Accident

 

Scroll to Top