ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ.

ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ ಮರಳಿದ್ದ ಲೋಹಿತ್ ಕುಮಾರ್, ಬಳಿಕ ವಾಟ್ಸಾಪ್ ಸ್ಟೇಟಸ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಮೆಸೇಜ್ ಹಾಕಿದ್ದರು ಎನ್ನಲಾಗಿದೆ. ಈ ಕುರಿತು ಲೋಹಿತ್ ಕುಮಾರ್ ಅವರ ಅಣ್ಣನ  ಮಗಳು ಸ್ವರ್ಣಪ್ಪನ್ ಅವರಿಗೆ ಮಾಹಿತಿ ನೀಡಿದ್ದು, ಅದರಂತೆ ಬೆಳಗ್ಗೆ ಲೋಹಿತ್ ಕುಮಾರ್ ಮನೆಗೆ ಬಂದು ನೋಡಿದಾಗ ಅವರು ಮನೆಯ ಹಾಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

error: Content is protected !!

Join the Group

Join WhatsApp Group