ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 20:ಚಲಿಸುತ್ತಿರುವಾಗಲೇ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಸ್‌ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಡುರಸ್ತೆಯಲ್ಲಿ ಬಸ್‌ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್‌ ಪೊಲೀಸರು ಓಡೋಡಿ ಬಂದಿದ್ದಾರೆ. ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಬಸ್ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಲ್ಲಿಸಿ, ಚಾಲಕನ್ನು ಕೆಳಗಿಳಿಸಿದ್ದಾರೆ. ನಂತರ ಅಂಬುಲೆನ್ಸ್‌ಗೂ ಕಾಯದೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಟ್ರಾಫಿಕ್‌ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಬಚಾವ್‌ ಆಗಿದ್ದಾರೆ.

error: Content is protected !!

Join the Group

Join WhatsApp Group