ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.


ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35) ಅವರನ್ನು ಮರದ ನೊಗದಿಂದ ಹೊಡೆದು ಕೊಲೆ ಮಾಡಿದ್ದ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದಿಯಾವರ್ ಅವರು ವಾದಿಸಿದ್ದರು. ನ್ಯಾಯಾಲಯವು 17 ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು, ಅದರಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯೆ ಡಾ.‌ವರ್ಷಾ ಎ.ಶೆಟ್ಟಿ ಮತ್ತು ಎಫ್.ಎಸ್.ಎಲ್‌ ನ ಡಾ. ಗೀತಾಲಕ್ಷ್ಮೀ ಅವರ ಸಾಕ್ಷ್ಯ ಮಹತ್ವದ್ದಾಗಿತ್ತು ಎಂದು ಸರಕಾರಿ ಅಭಿಯೋಜಕರು ತಿಳಿಸಿದ್ದಾರೆ.

error: Content is protected !!

Join WhatsApp Group

WhatsApp Share