ಶಿರೂರು ದುರಂತ- ನಾಪತ್ತೆಯಾಗಿದ್ದ ಲಾರಿ ಪತ್ತೆ..!

(ನ್ಯೂಸ್ ಕಡಬ) newskadaba.com ಅಂಕೋಲಾ, ಸೆ. 21. ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತವುಂಟಾದ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿದ್ದು, ಈ ಸಂದರ್ಭ ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರದಂದು ಮಧ್ಯಾಹ್ನ (ಸೆ.21) ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಮುಳುಗು ತಜ್ಞ ಈಶ್ವರ ಮಲ್ಪೆಯವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಲಾರಿ ಚಕ್ರ ಕಂಡು ಬಂದಿದ್ದು, ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿತ್ತು. ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ ಎನ್ನಲಾಗಿದೆ. ಕಳೆದ ಮಳೆಗಾಲದಲ್ಲಿ ಅಂದರೆ, ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಶಿರೂರು ಹೆದ್ದಾರಿಯ ರಸ್ತೆ ಬದಿಯಲ್ಲಿದ್ದ ಹೋಟೆಲ್ ಹಾಗೂ ಸಮೀಪ ನಿಲ್ಲಿಸಿದ್ದ ಕೇರಳ ಮೂಲದ ಲಾರಿಯೊಂದು ಚಾಲಕ ಅರ್ಜುನ್ ಸಹಿತ ನಾಪತ್ತೆಯಾಗಿತ್ತು. ಆ ವೇಳೆ ಹಲವು ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತಾದರೂ ನೀರಿನ ತೀವ್ರ ಸೆಳೆತದಿಂದ ಅಡ್ಡಿಯಾಗಿತ್ತು.

error: Content is protected !!

Join WhatsApp Group

WhatsApp Share