ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು.
1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2)ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ, 6)ಹೈನುಗಾರಿಕೆ, 7)ಕೋಳಿ ಸಾಕಾಣಿಕೆ, 8)ಮೀನುಗಾರಿಕೆ, 9)ರೇಷ್ಮೆ ಬೇಸಾಯ, 10) ಹೈಟೆಕ್ ತಂತ್ರಜ್ಞಾನ ಅಳವಡಿಕೆ(ಹಸಿರು ಮನೆ, ಅಭಿವೃದ್ಧಿ, ಸಸ್ಯಕಾಶಿ, ಕೃಷಿ ಯಾಂತ್ರೀಕರಣ ಇತ್ಯಾದಿ), 11) ಕೃಷಿ ಸಂಸ್ಕರಣೆ, 12)ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆ.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿಗಳನ್ನು, ಫೋಟೋಗ್ರಾಫ್‍ಗಳನ್ನು, ಖರ್ಚು ವೆಚ್ಚಗಳು, ವರಮಾನ, ಪತ್ರಿಕಾ ಪ್ರಕಟಣೆಗಳ ಮಾಹಿತಿ ಇತ್ಯಾದಿಗಳ ಪ್ರತಿ ಲಗತ್ತಿಸಬೇಕು. ಅಳವಡಿಸಿರುವ ತಾಂತ್ರಿಕತೆ ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆಗೆ ಮತ್ತು ಅಳವಡಿಕೆಗೆ ಸಹಕಾರಿಯಾಗುವಂತಿರಬೇಕು. ಕಳೆದೆರಡು ಸಾಲಿನಲ್ಲಿ ತಾಲೂಕು ಇಲ್ಲವೇ ಜಿಲ್ಲಾಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದವರು ಮುಂದಿನ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ಬಾರಿ ರಾಜ್ಯಮಟ್ಟದ ಶ್ರೇಷ್ಟ ಕೃಷಿಕ/ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದಲ್ಲಿ ಮತ್ತೆ ಯಾವುದೇ ತರನಾದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.ಅರ್ಜಿ ಸಲ್ಲಿಸಲು ಅಕ್ಟೋಬರ್ 18ಕೊನೆಯ ದಿನ. ಆಸ್ತಕರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group