ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಮೃತಪಟ್ಟ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 4 ಲಕ್ಷ ರೂ.ಗಳ ವಿಮಾ ಪರಿಹಾರ ವಿತರಿಸಲಾಯಿತು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಂದಿಗುಡ್ಡ ಫಸ್ಟ್ ಕ್ರಾಸ್ ಬಳಿ ವಾಸವಾಗಿದ್ದ ಮೃತ ಅರ್ಜುನ್ ಪೂಜಾರ್ (21) ಸ್ವಿಗ್ಗಿ ಡೆಲಿವರಿ ವೃತ್ತಿ ಮಾಡಿಕೊಂಡಿದ್ದು, 2024 ಫೆಬ್ರವರಿ 24 ರಂದು ಬಿಜೈ ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಕುಂಟಿಕಾನ ಕಡೆಗೆ ಫುಡ್ ಡೆಲಿವರಿ ಮಾಡಲು ತೆರಳುತ್ತಿರುವಾಗ ಜಯಲಕ್ಷ್ಮೀ ಬಟ್ಟೆ ಶೋರೂಂ ಬಳಿ ರಸ್ತೆ ಅಪಘಾತವಾಗಿ ಗಂಭೀರ ಗಾಯಗೊಂಡು  ಫೆಬ್ರವರಿ 26ರಂದು ಮೃತಪಟ್ಟಿರುತ್ತಾರೆ.

Also Read  ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಮೃತ ಅರ್ಜುನ್ ಪೂಜಾರಿ ಫೆಬ್ರವರಿ 14ರಂದು ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಗುರುತಿನ ಚೀಟಿ ಪಡೆದುಕೊಂಡಿದ್ದರು. ಮೃತರ ತಂದೆ ಮಾಡಿಗಪ್ಪ ಪೂಜಾರ್ ಅವರು ವಿಮಾ ಪರಿಹಾರಕ್ಕಾಗಿ ದ.ಕ ಕಾರ್ಮಿಕ ಅಧಿಕಾರಿ ದ.ಕ ಉಪವಿಭಾಗ-1 ಕಛೇರಿಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 19ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ 4 ಲಕ್ಷ ರೂ.ಗಳ ವಿಮಾ ಪರಿಹಾರವನ್ನು ಮೃತರ ತಂದೆಗೆ ವಿತರಿಸಿದರು.

error: Content is protected !!