ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ.

ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ನನ್ನ ಹೇಳಿಕೆಗಳು ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ನನ್ನ ಅಭಿಪ್ರಾಯಗಳು ಮತ್ತು ಮಾತುಗಳಿಂದ ನಾನು ಯಾರನ್ನಾದರೂ ನಿರಾಶೆಗೊಳಿಸಿದ್ದರೆ ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನಾನು ನನ್ನ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

error: Content is protected !!

Join the Group

Join WhatsApp Group