ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಸೆ. 26. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು ವಾಪಸ್ ಊರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Also Read  ಯು.ಟಿ. ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ ➤ ಕಮಿಷನರ್ ಗೆ ದೂರು ದಾಖಲು

error: Content is protected !!
Scroll to Top