ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 26. ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್  ಇಂದು (ಸೆ.26) ಜಾಮೀನು ಮಂಜೂರು ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 19ರಂದು ಹೈಕೋರ್ಟ್‌ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

 

Scroll to Top