ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ- ಸಿಎಂ ಮರು ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸೆ. 26. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿರುವ ಕುರಿತು ವರದಿಯಾಗಿದೆ.


ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗರು ಕೇಳಿದ ಕೂಡಲೇ ನಾನಿ ಯಾಕೆ ರಾಜೀನಾಮೆ ನೀಡಬೇಕು? ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ. ಬಿಜೆಪಿಯ ಅನೇಕ ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು, ಅವರು ರಾಜೀನಾಮೆ ಕೊಟ್ರಾ..? ಎಂದು ಸಿಎಂ ಈ ಸಂದರ್ಭದಲ್ಲಿ ವಾಗ್ಧಾಳಿ ನಡೆಸಿದರು.

error: Content is protected !!

Join the Group

Join WhatsApp Group